Wednesday 22 October 2014

ಮನೆ ಮದ್ದು :-() ನಿಂಬೆ ಹಣ್ಣಿನ ಉಪಯೋಗ :-


* ಅಜೀರ್ಣದಿಂದ ಹೊಟ್ಟೆನೋವು ಉಂಟಾಗಿದ್ದರೆ ಒಂದು ಲೋಟ ಬಿಸಿನೀರಿಗೆ ಒಂದು ನಿಂಬೆ ಹಣ್ಣಿನ ರಸವನ್ನು ಪೂರ್ತಿ ಹಿಂಡಿ ಅರ್ಧ ಟೀ ಚಮಚ ಅಡಿಗೆ ಸೋಡಾ ಸೇರಿಸಿ ಸೇವಿಸಿದರೆ ಶೀಘ್ರವೇ ಗುಣವಾಗುತ್ತದೆ.
* ನಿಂಬೆ ಹಣ್ಣಿನ ರಸದಲ್ಲಿ ಸಕ್ಕರೆ ಕಲಸಿ ಸ್ವಲ್ಪ ಸ್ವಲ್ಪವೇ ಕುಡಿಯುತ್ತಿದ್ದರೆ ವಾಂತಿ ನಿಲ್ಲುವುದು.
* ಸ್ವಲ್ಪ ಉಪ್ಪು ಬೆರೆಸಿದ ನೀರಿಗೆ ನಿಂಬೆ ಹಣ್ಣಿನ ರಸವನ್ನು ಮಿಶ್ರಮಾಡಿ ದಿನಕ್ಕೆ ಮೂರು ಭಾರಿ ಸೇವಿಸಿದರೆ ಅಜೀರ್ಣ ನಿವಾರಣೆಯಾಗುತ್ತದೆ.
*ಮಧ್ಯಮ ಗಾತ್ರದ ನಿಂಬೆ ಹಣ್ಣಿನ ರಸವನ್ನು ಸೇವಿಸುವುದರಿಂದ ಹುಳಿತೇಗು ಕಡಿಮೆಯಾಗುವುದು.
* ಒಂದು ನಿಂಬೆ ಹಣ್ಣಿನ ರಸ ತೆಗೆದು ಅದಕ್ಕೆ ರಸದ ಅರ್ಧ ಭಾಗದಷ್ಟು ಹರಳೆಣ್ಣೆಯನ್ನು ಸೇರಿಸಿ ಕುಡಿಯುವುದರಿಂದ ಹೊಟ್ಟೆ ನುಲುಯುವಿಕೆ ಮತ್ತು ಸಂಕಟ ನಿವಾರಣೆಯಾಗುತ್ತದೆ.
* ಆಗತಾನೆ ಹಿಂಡಿದ ಒಂದು ಲೋಟ ಹಸುವಿನ ನೊರೆಹಾಲಿಗೆ ಒಂದು ನಿಂಬೆ ಹಣ್ಣಿನ ರಸವನ್ನು ಸೇರಿಸಿ ತಕ್ಷಣ ಕುಡಿಯಬೇಕು. ಹೀಗೆ ಒಂದು ಹತ್ತು ದಿನಗಳವರೆಗೆ ಸೇವಿಸಿದರೆ ಮೂಲವ್ಯಾಧಿ ಕಡಿಮೆಯಾಗುತ್ತದೆ.
* ರಸಭರಿತವಾದ 30 ನಿಂಬೆ ಹಣ್ಣುಗಳನ್ನು ಎರಡು ಭಾಗವಾಗಿ ಕತ್ತರಿಸಿ ಅದಕ್ಕೆ ಅಡಿಗೆ ಉಪ್ಪನ್ನು ತುಂಬಿ 15 ದಿನಗಳ ಕಾಲ ಬಿಸಿಲಿನಲ್ಲಿ ಚೆನ್ನಾಗಿ ಒಣಗಿಸಿ ನಂತರ ಈ ಹೋಳುಗಳನ್ನು ಚೆನ್ನಾಗಿ ಕುಟ್ಟಿ ಚೂರ್ಣ ತಯಾರಿಸಿ ಪ್ರತಿದಿನ ಬೆಳಿಗ್ಯೆ ಹಸಿದ ಹೊಟ್ಟೆಯಲ್ಲಿ ಒಂದು ಚಮಚ ಚೂರ್ಣವನ್ನು ಸೇವಿಸಬೇಕು.ಈ ಕ್ರಮವನ್ನು ಒಂದು ತಿಂಗಳು ಕಾಲ ನಡೆಸಿದರೆ ರಕ್ತದ ಒತ್ತಡ ನಿವಾರಣೆಯಾಗುತ್ತದೆ.
* ಒಂದು ದೊಡ್ಡ ಲೋಟ ತಣ್ಣೀರಿಗೆ ಒಂದು ನಿಂಬೆ ಹಣ್ಣಿನ ರಸವನ್ನು ಸೇರಿಸಿ ದಿನಕ್ಕೆ ಒಂದು ಸಾರಿಯಂತೆ ಒಂದು ವಾರ ಸೇವಿಸಿದರೆ ಎದೆ ಉರಿ ಸಂಪೂರ್ಣ ಕಡಿಮೆಯಾಗುತ್ತದೆ.
* ಕಬ್ಬಿನ ಹಾಲಿಗೆ ಎಳನೀರು,ಶುಂಠಿ ರಸ, ನಿಂಬೆ ರಸ ಸೇರಿಸಿ ಕುಡಿಯುವುದರಿಂದ ಮೂತ್ರ ವಿಸರ್ಜನೆ ಚೆನ್ನಾಗಿ ಆಗುತ್ತದೆ.
~~~~~~~ ಮಾಹಿತಿ ಕೃಪೆ.----- ಒಬ್ಬ ಪ್ರಸಿದ್ಧ ಗಿಡಮೂಲಿಕೆ ಔಷಧ ಪಂಡಿತರು.

No comments:

Post a Comment

Note: only a member of this blog may post a comment.